ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆ ವಿದ್ಯಾಗಿರಿ ಬಂಟ್ವಾಳ,2025-26 ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ರಚನೆ.
ವಿದ್ಯಾರ್ಥಿ ಸಂಸತ್ತಿನ ರಚನೆಯ ಅಂಗವಾಗಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ ಮತ್ತು ಚುನಾವಣಾ ಪ್ರಚಾರದೊಂದಿಗೆ ಮತದಾನವು ನಡೆಯಿತು.
ಜೂ.13 ರಂದು  ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶಿಕ್ಷಕಿ ಶ್ರೀಮತಿ ಶರ್ಮಿಳ ಮತ್ತು ಸಂಘದ ಎಲ್ಲಾ ಸದಸ್ಯರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನೆರವೇರಿತು. ಆಧುನಿಕ ತಂತ್ರಜ್ಞಾನದ ಮೂಲಕ ಎಲ್ಲಾ ವಿದ್ಯಾರ್ಥಿಗಳು ಮತಚಲಾಯಿಸಿದರು.ಇದನ್ನೂ ಓದಿ :  ಕಲ್ಲಡ್ಕ ಶ್ರೀರಾಮ ಹಿ. ಪ್ರಾ. ಶಾಲೆಯಲ್ಲಿ “ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ”
ವಿದ್ಯಾರ್ಥಿ ಸಂಘದ ನಾಯಕರಾಗಿ ತನಿಷ್‌ಆರ್ ಶೆಟ್ಟಿಗಾರ್ 10 ನೇತರಗತಿ, ಉಪನಾಯಕನಾಗಿ ಯದ್ವಿತ್ 9ನೇತರಗತಿ, ಯೋಜನಾಧಿಕಾರಿಯಾಗಿ ಅನುಷ್ಕ ಶೆಟ್ಟಿ, 10 ನೇ ತರಗತಿ ಅವರು ಆಯ್ಕೆಯಾದರು.
ಪ್ರೌಢಶಾಲಾ ಮುಖ್ಯೋಪಾಧ್ಯಯರಾದ ಶ್ರೀಯುತ ಹರಿಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ರೀದೇವಿ ಪಿ.  ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿಯಾದ ಶ್ರೀಮತಿ ವೀಣಾ ದೇವಾಡಿಗ ಅವರ ಮಾರ್ಗದರ್ಶನದಲ್ಲಿ ಚುನಾವಣೆ ಯಶಸ್ವಿಯಾಗಿ ನಡೆಸಲಾಯಿತು.